Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:14 - ಕನ್ನಡ ಸಮಕಾಲಿಕ ಅನುವಾದ

14 ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುತ್ತಾನೆ, ತುರಾಯಿ ಅಲ್ಲೋನ್ ಮರಗಳನ್ನು ಆರಿಸಿಕೊಳ್ಳುತ್ತಾನೆ; ಅವುಗಳನ್ನು ವನವೃಕ್ಷಗಳ ನಡುವೆ ಬೆಳೆಸುತ್ತಾನೆ; ಪೀತದಾರ ಮರವನ್ನು ನೆಟ್ಟು, ಮಳೆ ಸುರಿದು ಬೆಳೆಯುವವರೆಗೂ ಕಾಯುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು, ವನವೃಕ್ಷಗಳಲ್ಲಿ ಒಂದನ್ನು ತನಗೋಸ್ಕರ ಸಲಹುವನು; ಅವನು ಪೀತದಾರವನ್ನು ನೆಡಲು ಮಳೆಯು ಅದನ್ನು ಬೆಳೆಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:14
6 ತಿಳಿವುಗಳ ಹೋಲಿಕೆ  

ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.


ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು