Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದರ ಒಂದು ಭಾಗ ಒಲೆಗಾಗುತ್ತದೆ, ಚಳಿ ಕಾಯಿಸಿಕೊಳ್ಳುವುದಕ್ಕೆ ಆಗುತ್ತದೆ, ರೊಟ್ಟಿ ಸುಡುವುದಕ್ಕಾಗುತ್ತದೆ. ಇನ್ನೊಂದು ಭಾಗದಿಂದ ದೇವತೆಯನ್ನು ಮಾಡಿ ಮನುಷ್ಯ ಪೂಜಿಸುತ್ತಾನೆ; ವಿಗ್ರಹ ಕೆತ್ತಿ ಅದಕ್ಕೆ ಅಡ್ಡಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು ಸೌದೆಗಾಗುವದು; ಅವನು ಸ್ವಲ್ಪ ತೆಗೆದು ಕಾಯಿಸಿಕೊಳ್ಳುವನು, ಉರಿಸಿ ರೊಟ್ಟಿಸುಡುವನು; ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ಬೊಂಬೆ ಕೆತ್ತಿ ಅಡ್ಡಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:15
10 ತಿಳಿವುಗಳ ಹೋಲಿಕೆ  

ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು?


ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.


ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.


ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು. ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು. ಮಾಂಸವನ್ನು ಸುಟ್ಟು ತೃಪ್ತಿಹೊಂದುವನು. ಅವನು ಚಳಿಕಾಯಿಸಿಕೊಳ್ಳುತ್ತಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು