Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:23 - ಕನ್ನಡ ಸಮಕಾಲಿಕ ಅನುವಾದ

23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:23
40 ತಿಳಿವುಗಳ ಹೋಲಿಕೆ  

ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ.


ಆಗ ಭೂಮಿ ಆಕಾಶಗಳೂ, ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶವನ್ನು ನೋಡಿ ಜಯಘೋಷ ಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


“ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.


ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,


ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?


ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.


ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.


ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,


ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.


ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.


ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ.


ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು