Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:26 - ಕನ್ನಡ ಸಮಕಾಲಿಕ ಅನುವಾದ

26 ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:26
53 ತಿಳಿವುಗಳ ಹೋಲಿಕೆ  

ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?


ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, ನೂತನ ಪಡಿಸುವರು.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ನನ್ನ ಸೇವಕನಲ್ಲದೆ ಕುರುಡನು ಯಾರು? ನಾನು ಕಳುಹಿಸಿದ ಸೇವಕನಲ್ಲದೆ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಯೆಹೋವ ದೇವರ ಸೇವಕನಂತೆ ಕುರುಡನು ಯಾರು?


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”


ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.


ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.


ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.


ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.


ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು