Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:8 - ಕನ್ನಡ ಸಮಕಾಲಿಕ ಅನುವಾದ

8 ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:8
55 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.


ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?


ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ, ನಾನೇ ರಕ್ಷಣೆಯನ್ನು ಪ್ರಕಟಿಸಿ, ತೋರಿಸಿದ್ದೇನೆ. ಆದ್ದರಿಂದ ನೀವು ನನ್ನ ಸಾಕ್ಷಿಗಳು,” “ನಾನೇ ದೇವರು ಎಂದು ಯೆಹೋವ ದೇವರು ನುಡಿಯುತ್ತಾರೆ.


ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.


“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.


ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.


ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು