Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:9 - ಕನ್ನಡ ಸಮಕಾಲಿಕ ಅನುವಾದ

9 ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:9
43 ತಿಳಿವುಗಳ ಹೋಲಿಕೆ  

ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.


“ಕಿವುಡರೇ, ಕೇಳಿರಿ; ಕುರುಡರೇ, ನೀವು ದೃಷ್ಟಿಸಿ ನೋಡಿರಿ.


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.


ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.


ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು ಮತ್ತು ಆ ಕೆತ್ತನೆಯ ಕೆಲಸದವರು ಮನುಷ್ಯ ಮಾತ್ರದವರೇ. ಅವರೆಲ್ಲರೂ ಒಟ್ಟುಗೂಡಿ ನಿಂತುಕೊಳ್ಳಲಿ. ಅವರು ಭಯಪಟ್ಟು, ಒಟ್ಟಿಗೆ ಲಜ್ಜೆಪಡುವರು.


ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.


ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಸೇವಕರು ತಿನ್ನುವರು. ಆದರೆ ನೀವು ಹಸಿದಿರುವಿರಿ. ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿ ಇರುವಿರಿ. ಇಗೋ, ನನ್ನ ಸೇವಕರು ಸಂತೋಷಪಡುವರು, ಆದರೆ ನೀವು ನಾಚಿಕೆ ಪಡುವಿರಿ.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು