Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:23 - ಕನ್ನಡ ಸಮಕಾಲಿಕ ಅನುವಾದ

23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:23
29 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:


ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.


ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.


ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು