Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:24 - ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:24
40 ತಿಳಿವುಗಳ ಹೋಲಿಕೆ  

“ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.


ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.


ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು