Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:9 - ಕನ್ನಡ ಸಮಕಾಲಿಕ ಅನುವಾದ

9 “ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:9
22 ತಿಳಿವುಗಳ ಹೋಲಿಕೆ  

ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


“ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.


ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು, ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು! ಉಂಟುಮಾಡಿದವನಿಗೆ ಉಂಟುಮಾಡಿದ್ದು, “ನೀನು ನನ್ನನ್ನು ಉಂಟುಮಾಡಲಿಲ್ಲ,” ಎಂತಲೂ, ಮಡಕೆ ಕುಂಬಾರನಿಗೆ, “ನಿನಗೆ ಏನೂ ಗೊತ್ತಿಲ್ಲ,” ಎಂತಲೂ ಹೇಳಬಹುದೇ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.


ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.


ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ!


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು