Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:13
34 ತಿಳಿವುಗಳ ಹೋಲಿಕೆ  

ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”


ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ನನ್ನದೆಲ್ಲವೂ ನಿಮ್ಮದೇ. ನಿಮ್ಮದೆಲ್ಲವೂ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು