Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:2 - ಕನ್ನಡ ಸಮಕಾಲಿಕ ಅನುವಾದ

2 ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಟ್ಟಿಗೆ ಕುಗ್ಗಿ ಬೊಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:2
16 ತಿಳಿವುಗಳ ಹೋಲಿಕೆ  

ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.


ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.


ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.


ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.


ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು