Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:6 - ಕನ್ನಡ ಸಮಕಾಲಿಕ ಅನುವಾದ

6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:6
21 ತಿಳಿವುಗಳ ಹೋಲಿಕೆ  

“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.


ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ಕೈಗಳುಂಟು, ಮುಟ್ಟುವುದಿಲ್ಲ; ಕಾಲುಗಳುಂಟು, ನಡೆಯುವುದಿಲ್ಲ; ಅವರ ಗಂಟಲಿನಿಂದ ಧ್ವನಿ ಉಚ್ಚರಿಸಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು