Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎದ್ದು ನಿಲ್ಲು, ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ಲೆಕ್ಕವಿಲ್ಲದ ನಿನ್ನ ಮಾಟಗಳನ್ನೂ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು, ಒಂದು ವೇಳೆ [ನಿನ್ನ ಶತ್ರುವಿನಲ್ಲಿ] ಭಯಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:12
22 ತಿಳಿವುಗಳ ಹೋಲಿಕೆ  

ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.


ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.


“ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.


ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು