Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:8 - ಕನ್ನಡ ಸಮಕಾಲಿಕ ಅನುವಾದ

8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:8
36 ತಿಳಿವುಗಳ ಹೋಲಿಕೆ  

“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.


“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.”


ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?


ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು