Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:9 - ಕನ್ನಡ ಸಮಕಾಲಿಕ ಅನುವಾದ

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:9
26 ತಿಳಿವುಗಳ ಹೋಲಿಕೆ  

ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.


ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.


ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು