Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:12 - ಕನ್ನಡ ಸಮಕಾಲಿಕ ಅನುವಾದ

12 “ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ನಾನೇ ಪರಮಾತ್ಮನು; ನಾನೇ ಆದಿ, ಅಂತವೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:12
28 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ.


“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.


“ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು