Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:16 - ಕನ್ನಡ ಸಮಕಾಲಿಕ ಅನುವಾದ

16 “ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:16
13 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.


ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು