Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:19 - ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:19
22 ತಿಳಿವುಗಳ ಹೋಲಿಕೆ  

ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು. ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ, ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


“ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು