Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:8 - ಕನ್ನಡ ಸಮಕಾಲಿಕ ಅನುವಾದ

8 ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:8
33 ತಿಳಿವುಗಳ ಹೋಲಿಕೆ  

ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.


ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ; ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ ಎಂದು ನೀನು ಕೊಚ್ಚಿಕೊಳ್ಳದಂತೆ, ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ.


ಯಾರನ್ನು ಹಾಸ್ಯಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲಿಸಿ, ನಾಲಿಗೆಯನ್ನು ಚಾಚುತ್ತೀರಿ?


ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು