Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:21 - ಕನ್ನಡ ಸಮಕಾಲಿಕ ಅನುವಾದ

21 ‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:21
21 ತಿಳಿವುಗಳ ಹೋಲಿಕೆ  

ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ?


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.


ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.


ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು