Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:12 - ಕನ್ನಡ ಸಮಕಾಲಿಕ ಅನುವಾದ

12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:12
20 ತಿಳಿವುಗಳ ಹೋಲಿಕೆ  

ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.


ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”


ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.


ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?


ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು