Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:26 - ಕನ್ನಡ ಸಮಕಾಲಿಕ ಅನುವಾದ

26 ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:26
23 ತಿಳಿವುಗಳ ಹೋಲಿಕೆ  

ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.


ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.


ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.


ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.


ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು