Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:11 - ಕನ್ನಡ ಸಮಕಾಲಿಕ ಅನುವಾದ

11 ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:11
30 ತಿಳಿವುಗಳ ಹೋಲಿಕೆ  

ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.


ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.


ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು