Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:12 - ಕನ್ನಡ ಸಮಕಾಲಿಕ ಅನುವಾದ

12 “ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:12
37 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.


ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.


ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.


ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು.


ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು.


ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.


“ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು