Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:13
22 ತಿಳಿವುಗಳ ಹೋಲಿಕೆ  

ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು