Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:14 - ಕನ್ನಡ ಸಮಕಾಲಿಕ ಅನುವಾದ

14 ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:14
21 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,


ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.


ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.


ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.


ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.


ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.


ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.


ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.


ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.


ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.


ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:


ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು