Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:8 - ಕನ್ನಡ ಸಮಕಾಲಿಕ ಅನುವಾದ

8 ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:8
34 ತಿಳಿವುಗಳ ಹೋಲಿಕೆ  

ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.


ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.


ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.


ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.


ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು