Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:10 - ಕನ್ನಡ ಸಮಕಾಲಿಕ ಅನುವಾದ

10 ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:10
62 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.


ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,


ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು