Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:3
35 ತಿಳಿವುಗಳ ಹೋಲಿಕೆ  

ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.


ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,


“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ಮಹಾನಾಮದ ನಿಮಿತ್ತ ದೂರದೇಶದಿಂದ ಬಂದ ಒಬ್ಬ ಪರದೇಶಿಯು, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು


ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು.


ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು