Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:11 - ಕನ್ನಡ ಸಮಕಾಲಿಕ ಅನುವಾದ

11 “ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:11
27 ತಿಳಿವುಗಳ ಹೋಲಿಕೆ  

ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.


“ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು