Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:7 - ಕನ್ನಡ ಸಮಕಾಲಿಕ ಅನುವಾದ

7 ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:7
38 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.


ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.


“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.


ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.


ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು