Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:13 - ಕನ್ನಡ ಸಮಕಾಲಿಕ ಅನುವಾದ

13 ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:13
45 ತಿಳಿವುಗಳ ಹೋಲಿಕೆ  

ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.


ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.


ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ನನ್ನ ಸೊತ್ತು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು. ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು