Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:15 - ಕನ್ನಡ ಸಮಕಾಲಿಕ ಅನುವಾದ

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:15
35 ತಿಳಿವುಗಳ ಹೋಲಿಕೆ  

ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.


ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,


ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”


ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು