Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:18 - ಕನ್ನಡ ಸಮಕಾಲಿಕ ಅನುವಾದ

18 ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:18
37 ತಿಳಿವುಗಳ ಹೋಲಿಕೆ  

“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ, ನಾನು ರೋಷದಿಂದ ಬುಸುಗುಟ್ಟುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


“ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.


ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು