Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:20 - ಕನ್ನಡ ಸಮಕಾಲಿಕ ಅನುವಾದ

20 “ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:20
18 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.


ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.


ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು