Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:3
31 ತಿಳಿವುಗಳ ಹೋಲಿಕೆ  

ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.


ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು