ಯೆಶಾಯ 60:15 - ಕನ್ನಡ ಸಮಕಾಲಿಕ ಅನುವಾದ15 ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.