Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:21 - ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:21
51 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.


ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.


ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.


ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.


ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು.


ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.


ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು