Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:17
23 ತಿಳಿವುಗಳ ಹೋಲಿಕೆ  

ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.


ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು