Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:4
19 ತಿಳಿವುಗಳ ಹೋಲಿಕೆ  

ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ನಿನ್ನ ಬೆತ್ತಲೆತನವು ಮರೆಮಾಡದೇ ಇದ್ದುದರಿಂದ ನೀನು ನಾಚಿಕೆಗೆ ಈಡಾಗುವೆ. ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು