Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:4 - ಕನ್ನಡ ಸಮಕಾಲಿಕ ಅನುವಾದ

4 ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:4
36 ತಿಳಿವುಗಳ ಹೋಲಿಕೆ  

ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.


ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು