Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:11 - ಕನ್ನಡ ಸಮಕಾಲಿಕ ಅನುವಾದ

11 “ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:11
24 ತಿಳಿವುಗಳ ಹೋಲಿಕೆ  

ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು