Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:12 - ಕನ್ನಡ ಸಮಕಾಲಿಕ ಅನುವಾದ

12 ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:12
34 ತಿಳಿವುಗಳ ಹೋಲಿಕೆ  

ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.


ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.


ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ. ನಾನು ಅವರನ್ನು ಕೇಳುವ ಪ್ರಶ್ನೆಗೆ, ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”


ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.


“ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು