Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:23 - ಕನ್ನಡ ಸಮಕಾಲಿಕ ಅನುವಾದ

23 ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:23
28 ತಿಳಿವುಗಳ ಹೋಲಿಕೆ  

ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.


ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು