Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:5 - ಕನ್ನಡ ಸಮಕಾಲಿಕ ಅನುವಾದ

5 ‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:5
17 ತಿಳಿವುಗಳ ಹೋಲಿಕೆ  

ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು