Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:8
14 ತಿಳಿವುಗಳ ಹೋಲಿಕೆ  

“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು. ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ, ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು