Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:9 - ಕನ್ನಡ ಸಮಕಾಲಿಕ ಅನುವಾದ

9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:9
25 ತಿಳಿವುಗಳ ಹೋಲಿಕೆ  

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು