Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:19 - ಕನ್ನಡ ಸಮಕಾಲಿಕ ಅನುವಾದ

19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:19
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.


ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.


ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.


ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು