Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:6 - ಕನ್ನಡ ಸಮಕಾಲಿಕ ಅನುವಾದ

6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:6
12 ತಿಳಿವುಗಳ ಹೋಲಿಕೆ  

ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.


ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,


ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.


ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.


ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು