Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:19 - ಕನ್ನಡ ಸಮಕಾಲಿಕ ಅನುವಾದ

19 ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:19
28 ತಿಳಿವುಗಳ ಹೋಲಿಕೆ  

ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆಗ ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ. ನಿನ್ನ ನುಡಿಯು ಧೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು. ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರುವುದು. ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.


ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?


ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.


ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.


ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.


ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.


ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.


‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ.


ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,


ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು